2024ರ ಬೆಂಕಿ ಬಬಲಾದಿ ಸದಾಶಿವ ಮುತ್ಯಾನ ಕಾಲಜ್ಞಾನ ಭವಿಷ್ಯ ಪ್ರಕಟ
ವಿಜಯಪುರ ಜಿಲ್ಲೆಯ ಬಬಲೇಶ್ವರ ತಾಲೂಕಿನ ಬಬಲಾದಿ ಸದಾಶಿವ ಮುತ್ಯಾನ ಮಠದ ಸ್ವಾಮೀಜಿ 2024ರ ಕಾಲಜ್ಞಾನ ಭವಿಷ್ಯ ನುಡಿದಿದ್ದಾರೆ. ಹೊಳೆಬಬಲಾದಿ ಮಠಾಧೀಶರು ಮತ್ತು ಕಾರ್ಣಿಕರಾದ ಸಿದ್ಧರಾಮಯ್ಯ ಹೊಳಿಮಠ ಗುರುಗಳು ಭವಿಷ್ಯ (Babaladi Prediction) ನುಡಿದಿದ್ದು, ಈ ವರ್ಷದ ಫಲಾಫಲಗಳನ್ನು ತೆರೆದಿಟ್ಟಿದ್ದಾರೆ.
ಉತ್ತರಕ್ಕೆ ಬರ ಹಾಗೂ ಕೆಡುಕಿದೆ. ದೊಡ್ಡ ದೊಡ್ಡ ಮಹಾಜನರ ಯೋಗ ಅಳಿಯುವುದು. ಕುಲ, ಜಾತಿಗಳಲ್ಲಿ ಕಲಹ ಜಾಸ್ತಿ ಆಗುತ್ತದೆ. ಮಳೆ, ಬೆಳೆ, ಫಲ ಕೆಂಡಮಂಡಲ ಆಗುತ್ತದೆ. ವ್ಯಾಪಾರಸ್ಥರಿಗೆ ಮಧ್ಯಮ ಫಲ ಇದೆ.
ರಾಜಕೀಯದಲ್ಲಿ ಉತ್ತಮ ವ್ಯಕ್ತಿಗೆ ಗೆಲುವು ಆಗುತ್ತದೆ. ಆದರೆ ಗಡಿ ಕಾಯುವ ಯೋಧರಿಗೆ ನೋವು ಇದೆ. ಕಣ್ಣಿನ ಕಾಯಿಲೆಗಳು ಜಾಸ್ತಿ ಆಗುತ್ತದೆ.