ಸಾಮೂಹಿಕ ಬ್ರಹ್ಮಧ್ವಜ ಪೂಜೆ, ದೇವಸ್ಥಾನ ಸ್ವಚ್ಛತೆ, ‘ಸುರಾಜ್ಯ ಸ್ಥಾಪನೆ’ಯ ಪ್ರತಿಜ್ಞಾವಿಧಿ ಸಂಪನ್ನ!

ಹಿಂದುಗಳ ಹೊಸ ವರ್ಷಾರಂಭ (ಯುಗಾದಿ) ಪ್ರಯುಕ್ತ ಸುರಾಜ್ಯ ಸ್ಥಾಪನೆಗಾಗಿ ‘ಹಿಂದು ಜನಜಾಗೃತಿ ಸಮಿತಿ, ಮಹಾರಾಷ್ಟ್ರ ಮಂದಿರ ಮಹಾಸಂಘ ಮತ್ತು ಕರ್ನಾಟಕ ದೇವಸ್ಥಾನ-ಮಠ ಮತ್ತು ಧಾರ್ಮಿಕ ಸಂಸ್ಥೆಗಳ ಮಹಾಸಂಘ, ದೇವಸ್ಥಾನಗಳ ವಿಶ್ವಸ್ಥರು, ಅರ್ಚಕರು ಮತ್ತು ಹಿಂದುತ್ವನಿಷ್ಠ ಸಂಘಟನೆ’ಗಳ ನೇತೃತ್ವದಲ್ಲಿ ಕರ್ನಾಟಕ, ಮಹಾರಾಷ್ಟ್ರ, ಗೋವಾ ಹಾಗೂ ಉತ್ತರ ಪ್ರದೇಶ ರಾಜ್ಯಗಳಲ್ಲಿ 350ಕ್ಕೂ ಅಧಿಕ ಕಡೆಗಳಲ್ಲಿ ಸಾಮೂಹಿಕವಾಗಿ ಬ್ರಹ್ಮಧ್ವಜ ಏರಿಸಿ ಪೂಜಿಸಲಾಯಿತು. ವಿಶೇಷವಾಗಿ ಹಲವೆಡೆ ಸಾಮೂಹಿಕ ದೇವಸ್ಥಾನ ಸ್ವಚ್ಛತೆಯೂ ನೆರವೇರಿತು. ಬ್ರಹ್ಮಧ್ವಜದ ಪೂಜೆ ನಂತರ ಎಲ್ಲರೂ ಒಟ್ಟಾಗಿ ‘ಸುರಾಜ್ಯ ಸ್ಥಾಪನೆ’ಯ ಸಾಮೂಹಿಕ ಪ್ರತಿಜ್ಞಾವಿಧಿ ತೆಗೆದುಕೊಂಡರು ಎಂದು ‘ಕರ್ನಾಟಕ ದೇವಸ್ಥಾನ-ಮಠ ಮತ್ತು ಧಾರ್ಮಿಕ ಸಂಸ್ಥೆಗಳ ಮಹಾಸಂಘ’ದ ರಾಜ್ಯ ಸಮನ್ವಯಕ ಕೆ. ಶಿವರಾಮ ತಿಳಿಸಿದ್ದಾರೆ.
ನಂದಿಕೇಶ್ವರದಲ್ಲಿ ಸಾಮೂಹಿಕ ಪ್ರತಿಜ್ಞಾವಿಧಿ
ಈ ವೇಳೆ ಮಾತನಾಡಿದ ಶಿವರಾಮ ಅವರು, ಹಿಂದು ಧರ್ಮದಲ್ಲಿ ಮೂರೂವರೆ ಮಹೂರ್ತದಲ್ಲಿ ಶುಭ ಕರ್ಮಗಳನ್ನು ಮಾಡುವ ಸಂಕಲ್ಪ ಮಾಡಲಾಗುತ್ತದೆ. ಯುಗಾದಿಯು ಈ ಮೂರೂವರೆ ಮಹೂರ್ತದಲ್ಲಿ ಒಂದಾಗಿದೆ. ಇತ್ತೀಚೆಗಷ್ಟೇ ಅಯೋಧ್ಯೆಯಲ್ಲಿ ಪ್ರಭು ಶ್ರೀರಾಮ ವಿರಾಜಮಾನನಾದ ನಂತರ ದೇಶಕ್ಕೆ ಆಧ್ಯಾತ್ಮಿಕ ಊರ್ಜೆ ಲಭಿಸಿದಂತಾಗಿದೆ. ಈಗ ದೇಶವು ರಾಮರಾಜ್ಯವಾಗಬೇಕಿದೆ ಅರ್ಥಾತ್ ‘ಸ್ವರಾಜ್ಯದಿಂದ ಸುರಾಜ್ಯ’ವಾಗಬೇಕಿದೆ! ಪ್ರಭು ಶ್ರೀರಾಮನು ಎಲ್ಲ ಜನರ ಕಲ್ಯಾಣವಾಗುವ ರಾಮರಾಜ್ಯದ ಸ್ಥಾಪನೆ ಮಾಡಿದ್ದರು. ಅದರಂತೆ ಆದರ್ಶ ರಾಜ್ಯದ ಸ್ಥಾಪನೆಗಾಗಿ ನಾವೆಲ್ಲರೂ ನಮ್ಮ ವೈಯಕ್ತಿಕ ಮತ್ತು ಸಾಮಾಜಿಕ ಜೀವನದಲ್ಲಿ ರಾಮರಾಜ್ಯ ತರಲು ನಿರಂತರ ಪ್ರಯತ್ನ ಮಾಡಬೇಕಾಗಿದೆ ಎಂದರು.
ರಾಯಚೂರಿನಲ್ಲಿ ಬ್ರಹ್ಮಧ್ವಜ ಪೂಜೆ
ರಾಯಭಾಗದಲ್ಲಿ ಬ್ರಹ್ಮಧ್ವಜ ಪೂಜೆ
ದಕ್ಷಿಣ ಕನ್ನಡದಲ್ಲಿ ಸಾಮೂಹಿಕ ಪ್ರತಿಜ್ಞೆ ಸ್ವೀಕಾರ
ವೈಯಕ್ತಿಕ ಜೀವನದಲ್ಲಿ ಸಾಧನೆ ಮಾಡಿ, ನೈತಿಕ ಹಾಗೂ ಸದಾಚಾರಿ ಜೀವನ ನಡೆಸುವ ಸಂಕಲ್ಪ ಮಾಡಬೇಕಿದೆ. ಸಾಮಾಜಿಕ ಜೀವನದಲ್ಲಿ ಭ್ರಷ್ಟಾಚಾರ, ಅನೈತಿಕತೆ ಮತ್ತು ಅರಾಜಕತೆಯನ್ನು ವಿರೋಧಿಸಲು ಕೃತಿಶೀಲರಾಗಬೇಕಿದೆ. ಸಾತ್ತ್ವಿಕ ಸಮಾಜದ ನೇತೃತ್ವದಲ್ಲೇ ಅಧ್ಯಾತ್ಮದ ಆಧಾರಿತ ರಾ‌‌ಷ್ಟ್ರರಚನೆ, ಅರ್ಥಾತ್ ರಾಮರಾಜ್ಯ ಸಂಭವವಾಗಲಿದೆ; ಆದ್ದರಿಂದ ಈ ಯುಗಾದಿಯಿಂದ ವೈಯಕ್ತಿಕ ಮತ್ತು ಸಾಮಾಜಿಕ ಜೀವನದಲ್ಲಿ ರಾಮರಾಜ್ಯ ತರಲು ಸಂಕಲ್ಪ ಮಾಡೋಣ ಎಂದರು.


ಶ್ರೀ ಮಲ್ಲಪ್ಪ ಪಟ್ಟಣಶೆಟ್ಟಿ

ಈ ಜಾಲತಾಣವು ಸಮಾಜದ ಎಲ್ಲ ವರ್ಗದವರಿಗೆ ವಿವಿಧ ರೀತಿಯ ಉಪಯುಕ್ತ ವಿಷಯ, ಮಾಹಿತಿಗಳನು ತಿಳಿಸಲು ಹಾಗು ಸಾಮಾನ್ಯ ಜ್ಞಾನವನ್ನು ಹೆಚ್ಚಿಸುವ ಸಾಮಾಜಿಕ ಮಾಧ್ಯಮ ವಾಗಿದೆ.

ಕಾಮೆಂಟ್‌‌ ಪೋಸ್ಟ್‌ ಮಾಡಿ

ನವೀನ ಹಳೆಯದು