ರಾಜ್ಯದ ಹಲವೆಡೆ ಗುಡುಗು ಸಹಿತ ಭಾರೀ ಮಳೆ! ಇನ್ನೆರಡು ದಿನ ಮುಂದುವರಿಕೆ

ರಾಜ್ಯದ ಉತ್ತರ ಒಳನಾಡಿನ ಕೆಲವೆಡೆ ಮತ್ತು ಕರಾವಳಿ – ದಕ್ಷಿಣ ಒಳನಾಡಿನ ಒಂದೆರಡು ಕಡೆಗಳಲ್ಲಿ ಮಳೆಯಾಗಿದ್ದು, ಇನ್ನೂ ಎರಡು ದಿನ ಹಲವು ಜಿಲ್ಲೆಗಳಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಏ. 20 ರಂದು ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಬಾಗಲಕೋಟೆ, ಬೆಳಗಾವಿ, ಧಾರವಾಡ, ಗದಗ, ಹಾವೇರಿ, ಕಲಬುರ್ಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ದಾವಣಗೆರೆ, ಹಾಸನ, ಚಿತ್ರದುರ್ಗ, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು ಮತ್ತು ವಿಜಯನಗರ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಮಳೆಯಾಗುವ ಸಾಧ್ಯತೆಯಿದೆ.

ಏ 21ರಂದು ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಬೆಳಗಾವಿ, ಧಾರವಾಡ, ಹಾವೇರಿ, ಚಿಕ್ಕಮಗಳೂರು, ಹಾಸನ, ಕೊಡಗು, ಮೈಸೂರು ಮತ್ತು ಶಿವಮೊಗ್ಗ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಮಳೆಯಾಗುವ ಸಾಧ್ಯತೆಯಿದೆ. ರಾಜ್ಯದ ಉಳಿದ ಜಿಲ್ಲೆಗಳಲ್ಲಿ ಒಣ ಹವೆ ಇರುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.


ಬೆಳಗಾವಿಯಲ್ಲಿ ಭಾರಿ ಮಳೆ
ಏ. 18ರ ಬೆಳಗ್ಗೆಯಿಂದ ಏ. 19ರ ಬೆಳಗ್ಗೆವರೆಗೆ ರಾಜ್ಯದ ಹಲವು ಹಲವೆಡೆ ಮಳೆಯಾಗಿದೆ. ಪ್ರಮುಖವಾಗಿ ಬೆಳಗಾವಿ ಜಿಲ್ಲೆ ಅಥಣಿ ಮತ್ತು ನಿಪ್ಪಾಣಿಯಲ್ಲಿ 6 ಸೆಂ.ಮೀ., ಬಾಗಲಕೋಟೆ ಜಿಲ್ಲೆಯ ಮಹಾಲಿಂಗಪುರದಲ್ಲಿ 4 ಸೆಂ.ಮೀ., ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರ, ಬಾಗಲಕೋಟೆ ಜಿಲ್ಲೆಯ ಲೋಕಾಪುರ, ಗದಗ, ಬೆಳಗಾವಿ ಜಿಲ್ಲೆಯ ಚಿಕ್ಕೋಡಿ, ಬೆಳಗಾವಿ ಜಿಲ್ಲೆ ಸೇಡಬಾಳ, ಶಿವಮೊಗ್ಗ ಜಿಲ್ಲೆಯ ಹುಂಚದಕಟ್ಟೆ, ತ್ಯಾಗರ್ತಿ, ಹಾಸನ ಜಿಲ್ಲೆಯ ಬೇಲೂರಿನಲ್ಲಿ ತಲಾ ಮೂರು ಸೆಂ.ಮೀ. ಮಳೆಯಾಗಿದೆ.


ದಾವಣಗೆರೆಗೆ ತಂಪೆರದ ಮಳೆ
ದಾವಣಗೆರೆ ಜಿಲ್ಲೆಯಲ್ಲಿ ಶುಕ್ರವಾರವೂ ಗುಡುಗು, ಸಿಡಿಲು, ಮಿಂಚಿನ ಆರ್ಭಟದ ಜತೆ ಮಳೆ ಮುಂದುವರಿದಿದ್ದು ಹಲವೆಡೆ ಬಿರು ಮಳೆ ಸುರಿದಿದೆ. ದಾವಣಗೆರೆ ನಗರದಲ್ಲೂ ಸಂಜೆ ನಂತರ ಮೋಡ ಮುಸುಕಿದ ವಾತಾವರಣವಿದ್ದು ತುಂತುರು ಮಳೆ ಸುರಿಯಿತು. ದಾವಣಗೆರೆ ನಗರ ಮತ್ತು ಮಾಯಕೊಂಡ ಭಾಗದಲ್ಲಿ ಗುಡುಗು, ಸಿಡಿಲು, ಮಿಂಚಿನ ಆರ್ಭಟ ಜೋರಿತ್ತು, ತುಂತುರು ಮಳೆ ಸುರಿದಿದೆ.
ಶಿವಮೊಗ್ಗದಲ್ಲಿ ಸಿಡಿಲು ಆರ್ಭಟ
ಶಿವಮೊಗ್ಗ ಜಿಲ್ಲೆಯ ವಿವಿಧೆಡೆಯೂ ಶುಕ್ರವಾರ ಸಂಜೆ ಗುಡುಗು, ಸಿಡಿಲು ಆರ್ಭಟದೊಂದಿಗೆ ಸಾಧಾರಣದಿಂದ ಜೋರು ಮಳೆ ಸುರಿಯಿತು. ಶಿವಮೊಗ್ಗ, ಶಿಕಾರಿಪುರ, ಸಾಗರ, ಭದ್ರಾವತಿ ತಾಲೂಕಿನಲ್ಲಿ ಚದುರಿದಂತೆ ಮಳೆ ಸುರಿಯಿತು. ಕೆಲವೆಡೆ ಮಳೆಗಿಂತ ಬಿರುಗಾಳಿ, ಸಿಡಿಲಿನಿಂದ ಹಾನಿಯೇ ಅಧಿಕವಾಗುತ್ತಿದೆ.


ಕೆಲವು ಭಾಗಗಳಲ್ಲಿ ಶುಕ್ರವಾರ ರಾತ್ರಿ ಆರಂಭವಾದ ಗುಡುಗು ಹಾಗೂ ಮಳೆ ಶನಿವಾರ ಬೆಳಗಿನವರೆಗೂ ಮುಂದುವರಿದಿದೆ. ಇದರಿಂದ ಮಲೆನಾಡು, ಕರಾವಳಿ ಭಾಗಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಿದೆ. ರಾಜಧಾನಿ ಬೆಂಗಳೂರಿನಲ್ಲಿ ಐದು ತಿಂಗಳ ಬಳಿಕ ಕೊನೆಗೂ ಮಳೆರಾಯನ ದರ್ಶನವಾಗಿದೆ. ನಗರದ ಕೆಲವು ಭಾಗಗಳಲ್ಲಿ ತುಂತುರು ಮಳೆ ಸುರಿದಿದೆ.
ರಾಜ್ಯದಲ್ಲಿ ಮುಂದಿನ 5 ದಿನ ಈ ಜಿಲ್ಲೆಗಳಲ್ಲಿ ಮಳೆ! IMD ಮುನ್ಸೂಚನೆ
ಬೆಂಗಳೂರು : ರಾಜ್ಯದಲ್ಲಿ ಮುಂದಿನ 5 ದಿನಗಳ ಕಾಲ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆಯು ಮುನ್ಸೂಚನೆಯನ್ನು ನೀಡಿದೆ. ಇಂದು ನಾವು ನಿಮಗೆ ಈ ಲೇಖನದಲ್ಲಿ ಎಲ್ಲೆಲ್ಲಿ ಮಳೆಯಾಗಲಿದೆ ಎಂದು ಸಂಪೂರ್ಣ ಮಾಹಿತಿಯನ್ನು ನೀಡುತ್ತೇವೆ, ಮಿಸ್‌ ಮಾಡದೆ ಕೊನೆಯವರೆಗೂ ಓದಿ.

ಮಾರ್ಚ್ 28 ರಿಂದ ಏಪ್ರಿಲ್ 1 ರವರೆಗೆ ಉತ್ತರ ಮತ್ತು ದಕ್ಷಿಣ ಒಳನಾಡಿನ ಕೆಲವು ಕಡೆಗಳಲ್ಲಿ ಗುಡುಗು ಸಹಿತ ಭಾರೀ ಮಳೆಯಾಗುವ ಸಾಧ್ಯತೆಯಿದೆ. ಆದರೆ ಬೆಂಗಳೂರಿನಲ್ಲಿ ಮಾತ್ರವೇ ಹೀಟ್ ವೇವ್ ಜಾಸ್ತಿಯಾಗಲಿದ್ದು, ಮಳೆಯಾಗುವಂತಹ ಯಾವುದೆ ಮುನ್ಸೂಚನೆಯಿಲ್ಲ.

ದಕ್ಷಿಣ ಒಳನಾಡಿನ ದಾವಣಗೆರೆ, ಶಿವಮೊಗ್ಗ ಸೇರಿದಂತೆ ಕೆಲವೊಂದು ಜಿಲ್ಲೆಗಳಲ್ಲಿ ಹೆಚ್ಚು ಮಳೆಯಾಗಲಿದೆ. ಹಾಗೂ ಉಡುಪಿ, ಚಿಕ್ಕಮಗಳೂರು, ಬೀದರ್, ಮೈಸೂರು, ಬಾಗಲಕೋಟೆ, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸಹ ಮಳೆಯಾಗಬಹುದು. ಉತ್ತರ ಒಳನಾಡಿನ ಹಾವೇರಿ, ಕೊಪ್ಪಳ, ಧಾರವಾಡ, ಬಾಗಲಕೋಟೆ, ಗದಗ, ವಿಜಯನಗರ ಹಾಗೂ ವಿಜಯಪುರದಲ್ಲಿ ಮೋಡ ಕವಿದಂತಹ ವಾತಾವರಣ ಇರಲಿದೆ ಎಂದು ಹವಾಮಾನ ಇಲಾಖೆಯು ಮುನ್ಸೂಚನೆಯನ್ನು ನೀಡಿದೆ.



ಶ್ರೀ ಮಲ್ಲಪ್ಪ ಪಟ್ಟಣಶೆಟ್ಟಿ

ಈ ಜಾಲತಾಣವು ಸಮಾಜದ ಎಲ್ಲ ವರ್ಗದವರಿಗೆ ವಿವಿಧ ರೀತಿಯ ಉಪಯುಕ್ತ ವಿಷಯ, ಮಾಹಿತಿಗಳನು ತಿಳಿಸಲು ಹಾಗು ಸಾಮಾನ್ಯ ಜ್ಞಾನವನ್ನು ಹೆಚ್ಚಿಸುವ ಸಾಮಾಜಿಕ ಮಾಧ್ಯಮ ವಾಗಿದೆ.

ಕಾಮೆಂಟ್‌‌ ಪೋಸ್ಟ್‌ ಮಾಡಿ

ನವೀನ ಹಳೆಯದು