ಬೆಂಗಳೂರಿನಲ್ಲಿ ನೈಜೀರಿಯನ್ ಪ್ರಜೆಗಳಿಂದ ಪೊಲೀಸರ ಮೇಲೆ ಹಲ್ಲೆ (ಕರ್ನಾಟಕ)

ಬೆಂಗಳೂರು (ಕರ್ನಾಟಕ) - ಏಪ್ರಿಲ್ 18 ಮತ್ತು 19 ರ ರಾತ್ರಿ ಕರ್ನಾಟಕದ ರಾಜಧಾನಿ ಬೆಂಗಳೂರಿನಲ್ಲಿ ಡ್ರಗ್ಸ್ ದಾಳಿಯ ವೇಳೆ ಪೊಲೀಸ್ ಸಿಬ್ಬಂದಿಯ ಮೇಲೆ ಹಲ್ಲೆ ನಡೆಸಿದ ಎಂಟು ನೈಜೀರಿಯಾ ಪ್ರಜೆಗಳನ್ನು ಭದ್ರತಾ ಪಡೆಗಳು ಬಂಧಿಸಿವೆ. ಬೆಂಗಳೂರು: ರಾಜಾನುಕುಂಟೆ ಪೊಲೀಸ್ ಠಾಣಾ ವ್ಯಾಪ್ತಿಯ ಮಾವಳ್ಳಿಪುರದಲ್ಲಿ ಮನೆಯಲ್ಲಿ ಡ್ರಗ್ಸ್ ಸೇವನೆ ಮತ್ತು ದಾಸ್ತಾನು ಮಾಡಿರುವ ಬಗ್ಗೆ ಮಾಹಿತಿ ಬಂದ ಹಿನ್ನೆಲೆಯಲ್ಲಿ ಪೊಲೀಸರು ದಾಳಿ ನಡೆಸಿದ್ದಾರೆ. ಸಿಸಿಬಿ ಇನ್ಸ್‌ಪೆಕ್ಟರ್ ಸುಬ್ರಹ್ಮಣ್ಯಸ್ವಾಮಿ ಸೇರಿದಂತೆ ಐದಕ್ಕೂ ಹೆಚ್ಚು ಸಿಬ್ಬಂದಿಯ ಮೇಲೆ ನೈಜೀರಿಯನ್ ಪ್ರಜೆಗಳು ಹಲ್ಲೆ ನಡೆಸಿದ್ದು, ಆರೋಪಿಗಳು ಪೊಲೀಸ್ ವಾಹನಕ್ಕೂ ಹಾನಿ ಮಾಡಿದ್ದಾರೆ. ಎಂಟು ನೈಜೀರಿಯನ್ ಪುಂಡರನ್ನು ರಾಜನಕುಂಟೆ ಬಳಿ ಬಂಧಿಸಲಾಗಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಸ್ಥಳದಿಂದ ತಪ್ಪಿಸಿಕೊಳ್ಳಲು ಆರೋಪಿಗಳು ಕಬ್ಬಿಣದ ರಾಡ್, ಕಲ್ಲು ಮತ್ತು ಹೆಲ್ಮೆಟ್‌ಗಳಿಂದ ಪೊಲೀಸರ ಮೇಲೆ ಹಲ್ಲೆ ನಡೆಸಿದ್ದಾರೆ. ಈ ಪ್ರಕರಣದ ಆರೋಪಿಗಳಿಗಾಗಿ ಪೊಲೀಸರು ಶೋಧ ನಡೆಸುತ್ತಿದ್ದಾರೆ.

ಶ್ರೀ ಮಲ್ಲಪ್ಪ ಪಟ್ಟಣಶೆಟ್ಟಿ

ಈ ಜಾಲತಾಣವು ಸಮಾಜದ ಎಲ್ಲ ವರ್ಗದವರಿಗೆ ವಿವಿಧ ರೀತಿಯ ಉಪಯುಕ್ತ ವಿಷಯ, ಮಾಹಿತಿಗಳನು ತಿಳಿಸಲು ಹಾಗು ಸಾಮಾನ್ಯ ಜ್ಞಾನವನ್ನು ಹೆಚ್ಚಿಸುವ ಸಾಮಾಜಿಕ ಮಾಧ್ಯಮ ವಾಗಿದೆ.

ಕಾಮೆಂಟ್‌‌ ಪೋಸ್ಟ್‌ ಮಾಡಿ

ನವೀನ ಹಳೆಯದು