ಮುರ್ಷಿದಾಬಾದ್ (ಬಂಗಾಳ) - ಶ್ರೀರಾಮ ನವಮಿಯಂದು ಮುರ್ಷಿದಾಬಾದ್ ಜಿಲ್ಲೆಯಲ್ಲಿ ನಡೆದ ಹಿಂಸಾಚಾರದ ಬಗ್ಗೆ ಕಲ್ಕತ್ತಾ ಹೈಕೋರ್ಟ್ನಲ್ಲಿ ಅರ್ಜಿ ಸಲ್ಲಿಸಲಾಗಿದೆ. ವಿಚಾರಣೆ ವೇಳೆ ಕೋರ್ಟ್ ರಾಜ್ಯ ಸರ್ಕಾರಕ್ಕೆ ಅಫಿಡವಿಟ್ ಸಲ್ಲಿಸುವಂತೆ ಸೂಚಿಸಿತ್ತು. ಪ್ರಸ್ತುತ ಕಾನೂನು ಮತ್ತು ಸುವ್ಯವಸ್ಥೆ ಪರಿಸ್ಥಿತಿಯನ್ನು ಗಮನದಲ್ಲಿಟ್ಟುಕೊಂಡು ಬರ್ಹಾಂಪೋರ್ ಲೋಕಸಭಾ ಕ್ಷೇತ್ರದ ಚುನಾವಣೆಯನ್ನು ಮುಂದೂಡುವಂತೆ ಅದು ಚುನಾವಣಾ ಆಯೋಗವನ್ನು ಕೇಳಿದೆ.👇
‘ಜನರು ಕೇವಲ 24 ಗಂಟೆಗಳ ಕಾಲವೂ ಸಂತೋಷ ಮತ್ತು ಶಾಂತಿಯುತವಾಗಿ ಹಬ್ಬವನ್ನು ಆಚರಿಸಲು ಸಾಧ್ಯವಾಗದಿದ್ದರೆ, ಈ ಕ್ಷೇತ್ರದಲ್ಲಿ ಚುನಾವಣೆ ನಡೆಸಬಾರದು. ನೀತಿ ಸಂಹಿತೆ ಜಾರಿಯಲ್ಲಿದ್ದರೂ 2 ಗುಂಪುಗಳ ನಡುವೆ ಹೊಡೆದಾಟಗಳು ನಡೆದರೆ; ಆಗ ಅವರು ತಮ್ಮ ಪ್ರತಿನಿಧಿಗಳಿಗೆ ಮತ ಚಲಾಯಿಸುವ ಹಕ್ಕನ್ನು ಹೊಂದಿರುವುದಿಲ್ಲ.
ಕೃಪೆ ಇಂಡಿಯಾ ಟುಡೇ
ಈ ಪ್ರಕರಣವನ್ನು ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್ಐಎ)ಯಿಂದ ತನಿಖೆ ನಡೆಸಬೇಕೆಂದು ಕೋರಿ ನ್ಯಾಯಾಲಯದಲ್ಲಿ ಅರ್ಜಿ ಸಲ್ಲಿಕೆಯಾಗಿದೆ. ಇದು ಏಪ್ರಿಲ್ 26 ರಂದು ವಿಚಾರಣೆಗೆ ಬರಲಿದೆ.
Tags
ಪ್ರಮುಖ ಸುದ್ದಿಗಳು