ಪೊಲೀಸರ ಪ್ರಕಾರ, ಬೆಂಗಳೂರಿನಲ್ಲಿ ಸಂಬಂಧಿಕರ ಮದುವೆ ಔತಣ ಕೂಟದಲ್ಲಿ ಪಾಲ್ಗೊಂಡು ಕುಟುಂಬ ಸಮೇತರಾಗಿ ಮಂಗಳೂರಿಗೆ ತೆರಳುತ್ತಿದ್ದಾಗ ಶಿರಾಡಿ ಘಾಟ್ನ ಕೆಂಪುಹೊಳೆ ಸೇತುವೆ ಬಳಿ ಈ ದುರ್ಘಟನೆ ಸಂಭವಿಸಿದೆ.
ಸಕಲೇಶಪುರ, ದಕ್ಷಿಣ ಕನ್ನಡ ಜಿಲ್ಲೆಯ ಶಿರಾಡಿ ಘಾಟ್ನಲ್ಲಿ ಮಂಗಳವಾರ ಮುಂಜಾನೆ ಎಸ್ಯುವಿ ಮತ್ತು ಕಂಟೈನರ್ ಲಾರಿ ನಡುವೆ ಡಿಕ್ಕಿ ಸಂಭವಿಸಿ ಒಂದೇ ಕುಟುಂಬದ ಇಬ್ಬರು ಸಾವನ್ನಪ್ಪಿದ್ದು, ಐವರು ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಮೃತರು ಮಂಗಳೂರು ತಾಲೂಕಿನ ಪಾಣೆಮಂಗಳೂರು ಸಮೀಪದ ಬೊಂಡಾಲ ಗ್ರಾಮದವರು.
ಪೊಲೀಸರ ಪ್ರಕಾರ, ಬೆಂಗಳೂರಿನಲ್ಲಿ ಸಂಬಂಧಿಕರ ಮದುವೆ ಔತಣ ಕೂಟದಲ್ಲಿ ಪಾಲ್ಗೊಂಡು ಕುಟುಂಬ ಸಮೇತರಾಗಿ ಮಂಗಳೂರಿಗೆ ತೆರಳುತ್ತಿದ್ದಾಗ ಶಿರಾಡಿ ಘಾಟ್ನ ಕೆಂಪುಹೊಳೆ ಸೇತುವೆ ಬಳಿ ಈ ದುರ್ಘಟನೆ ಸಂಭವಿಸಿದೆ.
ಗಂಭೀರವಾಗಿ ಗಾಯಗೊಂಡವರನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಪ್ರಕರಣ ದಾಖಲಿಸಿಕೊಂಡಿದ್ದು, ಹೆಚ್ಚಿನ ತನಿಖೆಗಾಗಿ ಟ್ರಕ್ ಚಾಲಕನನ್ನು ವಶಕ್ಕೆ ತೆಗೆದುಕೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.