ಭಾನುವಾರ ಬೆಳಗ್ಗೆ ಅರಣ್ಯ ಇಲಾಖೆ ಸಿಬ್ಬಂದಿಗೆ ಅರಣ್ಯ ಇಲಾಖೆಯ ವಾಚ್ ಟವರ್ ಬಳಿ ಆಕೆಯ ಶವ ಪತ್ತೆಯಾಗಿದೆ.
ಮೈಸೂರು: ಮೈಸೂರು ಜಿಲ್ಲೆ ಹೆಚ್ ಡಿ ಕೋಟೆ ತಾಲೂಕಿನ ಅಂತರಸಂತೆ ಪೊಲೀಸ್ ಠಾಣೆ ವ್ಯಾಪ್ತಿಯ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ (ಬಿಟಿಆರ್) ಸುತ್ತಲಿನ ಮೂರಬಾಂಡ್ ಗುಡ್ಡದ ಬಳಿ ಶನಿವಾರ ಸಂಜೆ ಮೇಕೆ ಮೇಯಿಸುತ್ತಿದ್ದ 48 ವರ್ಷದ ಆದಿವಾಸಿ ಮಹಿಳೆ ಹುಲಿ ದಾಳಿಗೆ ಬಲಿಯಾಗಿದ್ದಾರೆ.
ಭಾನುವಾರ ಬೆಳಗ್ಗೆ ಅರಣ್ಯ ಇಲಾಖೆ ಸಿಬ್ಬಂದಿಗೆ ಅರಣ್ಯ ಇಲಾಖೆಯ ವಾಚ್ ಟವರ್ ಬಳಿ ಆಕೆಯ ಶವ ಪತ್ತೆಯಾಗಿದೆ. ಮೇಕೆ ಮೇಯಿಸುತ್ತಿದ್ದ ಮತ್ತೊಬ್ಬ ವ್ಯಕ್ತಿ ಶನಿವಾರ ನಡೆದ ಘಟನೆಯ ಬಗ್ಗೆ ಗ್ರಾಮಸ್ಥರಿಗೆ ಮಾಹಿತಿ ನೀಡಿದ್ದರು.
ಶನಿವಾರದಿಂದಲೇ ಶವಕ್ಕಾಗಿ ಅರಣ್ಯ ಇಲಾಖೆ ಹುಡುಕಾಟ ಆರಂಭಿಸಿತ್ತು.
ಎಚ್ ಡಿ ಕೋಟೆ ತಾಲೂಕಿನ ಎನ್ ಬೇಗೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮಾಳದ ಹಾಡಿ ನಿವಾಸಿ ಚಿಕ್ಕಮ್ಮ ಮೃತ ದುರ್ದೈವಿ.
ಬಿಟಿಆರ್ ಡಿಸಿಎಫ್ ಪ್ರಭಾಕರನ್, ಎಸಿಎಫ್ ರವೀಂದ್ರ, ಆರ್ಎಫ್ಒ ಮಂಜುನಾಥ್, ಮೈಸೂರು ಎಎಸ್ಪಿ ಬಾಬು, ಹುಣಸೂರು ಉಪ ವಿಭಾಗದ ಡಿವೈಎಸ್ಪಿ ಗೋಪಾಲಕೃಷ್ಣ, ಸರ್ಕಲ್ ಇನ್ಸ್ಪೆಕ್ಟರ್ ಲಕ್ಷ್ಮೀಕಾಂತ್ ಮತ್ತಿತರರು ಸ್ಥಳಕ್ಕೆ ಭೇಟಿ ನೀಡಿ ಶವ ಪರೀಕ್ಷೆಗೆ ಕ್ರಮ ಕೈಗೊಂಡಿದ್ದಾರೆ. ಅವರ ಪುತ್ರ ಹಾಗೂ ಇಬ್ಬರು ಪುತ್ರಿಯರನ್ನು ಸಾಂತ್ವನಗೊಳಿಸಿ 5 ಲಕ್ಷ ರೂ.ಗಳ ಚೆಕ್ ನೀಡಿದರು.