10 ರಿಂದ 12 ನಕ್ಸಲರು ಗಾಯಗೊಂಡಿದ್ದಾರೆ
ಪ್ರಸ್ತುತ ವಿಶೇಷ ಕಾರ್ಯಾಚರಣೆ ಪಡೆಗಳು, ಜಿಲ್ಲಾ ಮೀಸಲು ಪಡೆಗಳು, ಕೇಂದ್ರೀಯ ಮೀಸಲು ಪೊಲೀಸ್ ಪಡೆ, ಗಡಿ ಭದ್ರತಾ ಪಡೆ ಮತ್ತು 'ಕೋಬ್ರಾ ಕಮಾಂಡೋಸ್' ನ ಸುಮಾರು 1,000 ಸೈನಿಕರ ಪ್ರಬಲ ತಂಡ ನಕ್ಸಲರ ವಿರುದ್ಧ ಕಾರ್ಯಾಚರಣೆ ನಡೆಸುತ್ತಿದೆ.
ರಾಯ್ಪುರ (ಛತ್ತೀಸ್ಗಢ) - ಛತ್ತೀಸ್ಗಢ ಮತ್ತು ಮಹಾರಾಷ್ಟ್ರ ರಾಜ್ಯಗಳ ಗಡಿ ಸಮೀಪದ ದಾಂತೇವಾಡದಲ್ಲಿ ಭದ್ರತಾ ಪಡೆಗಳು ಮತ್ತು ನಕ್ಸಲರ ನಡುವೆ ಮತ್ತೊಮ್ಮೆ ಎನ್ಕೌಂಟರ್ ನಡೆದಿದೆ. ಭದ್ರತಾ ಪಡೆಗಳು ನಡೆಸಿದ ಈ ಕಾರ್ಯಾಚರಣೆಯಲ್ಲಿ ಏಳು ನಕ್ಸಲರು ಸಾವನ್ನಪ್ಪಿದ್ದು, 10-12 ಮಂದಿ ಗಾಯಗೊಂಡಿದ್ದಾರೆ. ಈ ಎನ್ಕೌಂಟರ್ನಲ್ಲಿ ಹತರಾದ ನಕ್ಸಲರಿಂದ ಹಲವಾರು ಶಸ್ತ್ರಾಸ್ತ್ರಗಳನ್ನು ವಶಪಡಿಸಿಕೊಳ್ಳಲಾಗಿದೆ.
ಪ್ರಸ್ತುತ ವಿಶೇಷ ಕಾರ್ಯಾಚರಣೆ ಪಡೆಗಳು, ಜಿಲ್ಲಾ ಮೀಸಲು ಪಡೆಗಳು, ಕೇಂದ್ರೀಯ ಮೀಸಲು ಪೊಲೀಸ್ ಪಡೆ, ಗಡಿ ಭದ್ರತಾ ಪಡೆ ಮತ್ತು 'ಕೋಬ್ರಾ ಕಮಾಂಡೋಸ್' ನ ಸುಮಾರು 1,000 ಸೈನಿಕರ ಪ್ರಬಲ ತಂಡ ನಕ್ಸಲರ ವಿರುದ್ಧ ಕಾರ್ಯಾಚರಣೆ ನಡೆಸುತ್ತಿದೆ. ಕಂಕೇರ್, ಬಸ್ತಾರ್ ಮತ್ತು ಬಿಜಾಪುರದಲ್ಲಿ ಭದ್ರತಾ ಪಡೆಗಳು ಇತ್ತೀಚೆಗೆ ನಡೆಸಿದ ಕಾರ್ಯಾಚರಣೆಯಲ್ಲಿ ಹಲವಾರು ನಕ್ಸಲರು ಕೊಲ್ಲಲ್ಪಟ್ಟರು. ಈ ಕಾರ್ಯಾಚರಣೆಯಲ್ಲಿ ಕೆಲವು ಯೋಧರೂ ಗಾಯಗೊಂಡಿದ್ದಾರೆ.